Fake News - Kannada
 

ನೀತಾ ಅಂಬಾನಿಯವರು ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಾಗಿ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ನೀಡಿಲ್ಲ.

0

ಅಯೋಧ್ಯೆಯಲ್ಲಿ ರಾಮ್ ದೇವಾಲಯ ನಿರ್ಮಾಣಕ್ಕಾಗಿ 111 ಕೆಜಿ ಬೆಳ್ಳಿ ಮತ್ತು 33 ಕೆಜಿ ತೂಕದ ಮೂರು ಚಿನ್ನದ ಕಿರೀಟಗಳನ್ನು ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿ ದೇಣಿಗೆ ನೀಡಿದ್ದಾರೆ ಎಂದು ಹೇಳುವ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಪ್ರತಿಪಾಧಾನೆಯ ಸತ್ಯಾಸತ್ಯತೆಯನ್ನು ವಿಶ್ಲೇಷಿಸೋಣ.

ಪೋಸ್ಟ್ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿ ಕಾಣಬಹುದು.

ಪ್ರತಿಪಾದನೆಯಲ್ಲಿ: ಅಯೋಧ್ಯೆಯಲ್ಲಿ ರಾಮ್ ದೇವಾಲಯ ನಿರ್ಮಾಣಕ್ಕಾಗಿ ನೀತಾ ಅಂಬಾನಿ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದಾನ ಮಾಡಿದ್ದಾರೆ.

ಸತ್ಯ: ಅಯೋಧ್ಯೆಯಲ್ಲಿ ರಾಮ್ ದೇವಾಲಯ ನಿರ್ಮಾಣಕ್ಕಾಗಿ ನೀತಾ ಅಂಬಾನಿಯವರು ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದಾನ ಮಾಡಿದ್ದಾರೆ ಎಂಬ ಸುದ್ದಿ ನಕಲಿ. ದೇವಾಲಯದ ನಿರ್ಮಾಣದ ಮುನ್ಸೂಚನೆ ನೀಡಬೇಕಾದ ‘ಟ್ರಸ್ಟ್’ ಇನ್ನೂ ಸಂಪೂರ್ಣವಾಗಿ ಸ್ಥಾಪನೆಯಾಗಿಲ್ಲ. ಆದ್ದರಿಂದ, ಪ್ರತಿಪಾಧಾನೆ ತಪ್ಪಾಗಿದೆ.

ಅಯೋಧ್ಯೆಯಲ್ಲಿ ನಿರ್ಮಿಸಲಿರುವ ರಾಮ್ ಮಂದಿರಕ್ಕೆ ನೀತಾ ಅಂಬಾನಿಯವರು ಯಾವುದಾದರು ದೇಣಿಗೆ ನೀಡಿದ್ದಾರೆಯೇ ಎಂದು ಗೂಗಲ್‌ನಲ್ಲಿ ಹುಡುಕಿದಾಗ, ಅದನ್ನು ದೃಡಿ ಕರಿಸುವ ಯಾವುದೇ ಮಾಹಿತಿ ಕಂಡುಬಂದಿಲ್ಲ. ಈ ಮೊದಲು, ರಾಮ್ ಮಂದಿರಕ್ಕೆ ದೇಣಿಗೆ ನೀಡಿದ ಬಗ್ಗೆ ಕೆಲವು ಪೋಸ್ಟ್‌ಗಳು ವೈರಲ್ ಆಗಿದ್ದಾಗ, ‘ಫ್ಯಾಕ್ಟ್‌ಲಿ’ ಅವುಗಳನ್ನು ರದ್ದುಗೊಳಿಸಿತು ಮತ್ತು ಆ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಅಯೋಧ್ಯೆಯ ಮಂದಿರ-ಮಸೀದಿ ಪ್ರಕರಣದ ತೀರ್ಪಿನಲ್ಲಿ, ಅಯೋಧ್ಯೆಯಲ್ಲಿ ರಾಮ್ ದೇವಾಲಯ ನಿರ್ಮಾಣದ ಮುನ್ಸೂಚನೆ ನೀಡುವ ಟ್ರಸ್ಟ್ ಸ್ಥಾಪಿಸಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಾಮ್ ದೇವಾಲಯ ನಿರ್ಮಾಣಕ್ಕಾಗಿ 15 ಸದಸ್ಯರ ಟ್ರಸ್ಟ್ – ‘ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ’ ಸ್ಥಾಪಿಸುವ ಬಗ್ಗೆ ಇತ್ತೀಚೆಗೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಘೋಷಿಸಿದರು. ಆದರೆ, ‘ದಿ ಹಿಂದೂ’ ಲೇಖನದಲ್ಲಿ, ಇನ್ನೂ ಕೆಲವು ಸದಸ್ಯರನ್ನು ಆಯ್ಕೆ ಮಾಡದ ಕಾರಣ ಟ್ರಸ್ಟ್ ಅನ್ನು ಇನ್ನೂ ಸಂಪೂರ್ಣವಾಗಿ ಸ್ಥಾಪಿಸಲಾಗಿಲ್ಲ ಎಂದು ಓದಬಹುದು. ಟ್ರಸ್ಟ್ ಯಾವುದೇ ಹಣವನ್ನು ಕೋರಿಲ್ಲ.

ತೀರ್ಮಾನಕ್ಕೆ, ಅಯೋಧ್ಯೆಯಲ್ಲಿ ರಾಮ್ ದೇವಾಲಯದ ನಿರ್ಮಾಣಕ್ಕಾಗಿ ನೀತಾ ಅಂಬಾನಿಯವರು ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದಾನ ಮಾಡಿಲ್ಲ.

Share.

About Author

Comments are closed.

scroll